Mysore
30
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಎತ್ತಿನಗಾಡಿಗೆ ಖಾಸಗಿ ಬಸ್‌ ಡಿಕ್ಕಿ : ಎತ್ತು ಸಾವು

ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ.

ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿವೆ.

ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿ ಮದ್ದೂರು-ಮಳವಳ್ಳಿ ಹೆದ್ದಾರಿ ಮಾರ್ಗವಾಗಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಮಳವಳ್ಳಿ ಕಡೆಯಿಂದ ಬಂದ ಖಾಸಗಿ ಬಸ್ಸೊಂದು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಎತ್ತಿನ ಗಾಡಿ ರಸ್ತೆ ಪಕ್ಕದ ಜಮೀನಿಗೆ ಉರುಳಿಬಿದ್ದಿದೆ. ಬಸ್ಸು ಬರುತ್ತಿದ್ದುದ್ದನ್ನು ಕಂಡ ಎತ್ತಿನ ಗಾಡಿ ಸವಾರ ಪಕ್ಕದ ಜಮೀನಿಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.

ಈ ಸಂಬಂಧ ಭಾರತೀನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!