ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ.
ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿವೆ.
ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿ ಮದ್ದೂರು-ಮಳವಳ್ಳಿ ಹೆದ್ದಾರಿ ಮಾರ್ಗವಾಗಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಮಳವಳ್ಳಿ ಕಡೆಯಿಂದ ಬಂದ ಖಾಸಗಿ ಬಸ್ಸೊಂದು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಎತ್ತಿನ ಗಾಡಿ ರಸ್ತೆ ಪಕ್ಕದ ಜಮೀನಿಗೆ ಉರುಳಿಬಿದ್ದಿದೆ. ಬಸ್ಸು ಬರುತ್ತಿದ್ದುದ್ದನ್ನು ಕಂಡ ಎತ್ತಿನ ಗಾಡಿ ಸವಾರ ಪಕ್ಕದ ಜಮೀನಿಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.
ಈ ಸಂಬಂಧ ಭಾರತೀನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…