ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇಂದು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯ ಕಾರ್ಯಾಚರಣೆ ವೀಕ್ಷಿಸಲು ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಚಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯವನ್ನು ಜಿಲ್ಲಾಧಿಕಾರಿಗಳು, ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ಸಮ್ಮೇಳನದ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ಮಂಗಳವಾರ ಅಥವಾ ಬುಧವಾರದೊಳಗೆ ವೇದಿಕೆಯ ಕಾಮಗಾರಿ ಪೂರ್ಣಗೊಳ್ಳಲಿದೆ, ನಾಳೆಯಿಂದ ನಾನು ಸಹ ಸಂಪೂರ್ಣವಾಗಿ ವೇದಿಕೆ ನಿರ್ಮಾಣದ ಸ್ಥಳದಲ್ಲಿ ಇದ್ದು ವೇದಿಕೆ ಕಾರ್ಯಗಳನ್ನು ವೀಕ್ಷಿಸಲಿದ್ದೇನೆ ಎಂದು ತಿಳಿಸಿದರು.
ಒಂದರಿಂದ ಒಂದೂವರೆ ಲಕ್ಷ ಜನ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ, ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದರು.
ಸಮ್ಮೇಳನದಲ್ಲಿ ಗೋಷ್ಠಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಇನ್ನೂ ಅನೇಕ ವಿಚಾರಗಳ ಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…