ಮಂಡ್ಯ

ಆಸ್ತಿ ಕಲಹ | ಮಲಮಗಳ ಮೇಲೆ ತಾಯಿ ದೌರ್ಜನ್ಯ ; ವಿಡಿಯೊ ವೈರಲ್‌

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ ಹಾಕಿಕೊಂಡು ದಬ್ಬಾಳಿಕೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗ್ರಾಮದ ಪುಟ್ಟಸ್ವಾಮಿ ಎಂಬುವರಿಗೆ ಇಬ್ಬರು ಹೆಂಡ್ತಿಯರು ಮೊದಲ ಹೆಂಡ್ತಿಗೆ ಇಬ್ಬರು ಮಕ್ಕಳಿದ್ದು, ಹಲವು ವರ್ಷಗಳ ಹಿಂದೆ ಮೊದಲ ಹೆಂಡ್ತಿ ಮೃತ ಪಟ್ಟ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಭಾಗ್ಯ ಎಂಬುವವರನ್ನು 2 ನೇ ವಿವಾಹವಾದರು. ವಿವಾಹವಾದ ಕೆಲವೇ ತಿಂಗಳಲ್ಲಿ ಪುಟ್ಟಸ್ವಾಮಿ ಮೃತಪಟ್ಟರು ಎನ್ನಲಾಗಿದೆ.

ಇದರಿಂದ ಮೊದಲ ಹೆಂಡ್ತಿಯ ಮಕ್ಕಳು ಹಾಗೂ 2 ನೇ ಹೆಂಡ್ತಿ ಭಾಗ್ಯ ಎಂಬುವರ ನಡುವೆ ಜಮೀನಿನ ವಿಚಾರವಾಗಿ ಆಗಾಗೇ ಕಲಹ ನಡೆಯಿತ್ತು. ಭಾನುವಾರ ಜಮೀನಿನ ಬಳಿ ಮಲತಾಯಿ ಭಾಗ್ಯ ನಾಟಿ ಮಾಡುವ ಸಂದರ್ಭದಲ್ಲಿ ಸ್ಥಳಕ್ಕೆ ಮಗಳು ರೋಜಾ ಬಂದಾಗ ಜಮೀನಿನಿ ವಿಷಯವಾಗಿ ಇಬ್ಬರು ನಡುವೆ ಜಗಳ ನಡೆದು ಕೊನೆಗೆ ಮಲತಾಯಿ ಭಾಗ್ಯ ಮಗಳು ರೋಜಾ ಅವರನ್ನು ಕೆಳಗೆ ಹಾಕಿ ಮೇಲೆ ಕುಳಿತುಕೊಂಡು ದೌರ್ಜನ್ಯ ಮಾಡಿದ್ದಾರೆ ಎಂದು ಮಗಳು ರೋಜಾ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

9 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

9 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago