ಮಂಡ್ಯ

ಆಸ್ತಿ ಕಲಹ | ಮಲಮಗಳ ಮೇಲೆ ತಾಯಿ ದೌರ್ಜನ್ಯ ; ವಿಡಿಯೊ ವೈರಲ್‌

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ ಹಾಕಿಕೊಂಡು ದಬ್ಬಾಳಿಕೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗ್ರಾಮದ ಪುಟ್ಟಸ್ವಾಮಿ ಎಂಬುವರಿಗೆ ಇಬ್ಬರು ಹೆಂಡ್ತಿಯರು ಮೊದಲ ಹೆಂಡ್ತಿಗೆ ಇಬ್ಬರು ಮಕ್ಕಳಿದ್ದು, ಹಲವು ವರ್ಷಗಳ ಹಿಂದೆ ಮೊದಲ ಹೆಂಡ್ತಿ ಮೃತ ಪಟ್ಟ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಭಾಗ್ಯ ಎಂಬುವವರನ್ನು 2 ನೇ ವಿವಾಹವಾದರು. ವಿವಾಹವಾದ ಕೆಲವೇ ತಿಂಗಳಲ್ಲಿ ಪುಟ್ಟಸ್ವಾಮಿ ಮೃತಪಟ್ಟರು ಎನ್ನಲಾಗಿದೆ.

ಇದರಿಂದ ಮೊದಲ ಹೆಂಡ್ತಿಯ ಮಕ್ಕಳು ಹಾಗೂ 2 ನೇ ಹೆಂಡ್ತಿ ಭಾಗ್ಯ ಎಂಬುವರ ನಡುವೆ ಜಮೀನಿನ ವಿಚಾರವಾಗಿ ಆಗಾಗೇ ಕಲಹ ನಡೆಯಿತ್ತು. ಭಾನುವಾರ ಜಮೀನಿನ ಬಳಿ ಮಲತಾಯಿ ಭಾಗ್ಯ ನಾಟಿ ಮಾಡುವ ಸಂದರ್ಭದಲ್ಲಿ ಸ್ಥಳಕ್ಕೆ ಮಗಳು ರೋಜಾ ಬಂದಾಗ ಜಮೀನಿನಿ ವಿಷಯವಾಗಿ ಇಬ್ಬರು ನಡುವೆ ಜಗಳ ನಡೆದು ಕೊನೆಗೆ ಮಲತಾಯಿ ಭಾಗ್ಯ ಮಗಳು ರೋಜಾ ಅವರನ್ನು ಕೆಳಗೆ ಹಾಕಿ ಮೇಲೆ ಕುಳಿತುಕೊಂಡು ದೌರ್ಜನ್ಯ ಮಾಡಿದ್ದಾರೆ ಎಂದು ಮಗಳು ರೋಜಾ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

7 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago