ಮಂಡ್ಯ

ಆಸ್ತಿ ಕಲಹ | ಮಲಮಗಳ ಮೇಲೆ ತಾಯಿ ದೌರ್ಜನ್ಯ ; ವಿಡಿಯೊ ವೈರಲ್‌

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ ಹಾಕಿಕೊಂಡು ದಬ್ಬಾಳಿಕೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗ್ರಾಮದ ಪುಟ್ಟಸ್ವಾಮಿ ಎಂಬುವರಿಗೆ ಇಬ್ಬರು ಹೆಂಡ್ತಿಯರು ಮೊದಲ ಹೆಂಡ್ತಿಗೆ ಇಬ್ಬರು ಮಕ್ಕಳಿದ್ದು, ಹಲವು ವರ್ಷಗಳ ಹಿಂದೆ ಮೊದಲ ಹೆಂಡ್ತಿ ಮೃತ ಪಟ್ಟ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಭಾಗ್ಯ ಎಂಬುವವರನ್ನು 2 ನೇ ವಿವಾಹವಾದರು. ವಿವಾಹವಾದ ಕೆಲವೇ ತಿಂಗಳಲ್ಲಿ ಪುಟ್ಟಸ್ವಾಮಿ ಮೃತಪಟ್ಟರು ಎನ್ನಲಾಗಿದೆ.

ಇದರಿಂದ ಮೊದಲ ಹೆಂಡ್ತಿಯ ಮಕ್ಕಳು ಹಾಗೂ 2 ನೇ ಹೆಂಡ್ತಿ ಭಾಗ್ಯ ಎಂಬುವರ ನಡುವೆ ಜಮೀನಿನ ವಿಚಾರವಾಗಿ ಆಗಾಗೇ ಕಲಹ ನಡೆಯಿತ್ತು. ಭಾನುವಾರ ಜಮೀನಿನ ಬಳಿ ಮಲತಾಯಿ ಭಾಗ್ಯ ನಾಟಿ ಮಾಡುವ ಸಂದರ್ಭದಲ್ಲಿ ಸ್ಥಳಕ್ಕೆ ಮಗಳು ರೋಜಾ ಬಂದಾಗ ಜಮೀನಿನಿ ವಿಷಯವಾಗಿ ಇಬ್ಬರು ನಡುವೆ ಜಗಳ ನಡೆದು ಕೊನೆಗೆ ಮಲತಾಯಿ ಭಾಗ್ಯ ಮಗಳು ರೋಜಾ ಅವರನ್ನು ಕೆಳಗೆ ಹಾಕಿ ಮೇಲೆ ಕುಳಿತುಕೊಂಡು ದೌರ್ಜನ್ಯ ಮಾಡಿದ್ದಾರೆ ಎಂದು ಮಗಳು ರೋಜಾ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

2 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

3 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago