Kukkuta Sanjeevini project K.R. Nandini
ಮಂಡ್ಯ : ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು.
ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್ ಅವರ “ಗೌರಮ್ಮ ನಾಟಿ ಮೇಕೆ ಫಾರ್ಮ್” ಗೆ ಭೇಟಿ ನೀಡಿದ ವೇಳೆ ಅವರು ತಿಳಿಸಿದರು.
ಜಗದೀಶ್ ಅವರ ಫಾರ್ಮ್ ನಲ್ಲಿ ವಿವಿಧ ತಳಿಯ ಮೇಕೆಗಳ ಕುರಿತು ಮಾಹಿತಿ ಪಡೆದ ಅವರು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಾ ಲಾಭದ ಹಾದಿಯಲ್ಲಿ ಮುನ್ನಡೆದಿರುವ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಗದೀಶ್ ಅವರ ನಡೆ ಇತರ ಕೃಷಿಕರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ಕುಕ್ಕುಟ ಸಂಜೀವಿನಿ ಯೋಜನೆಯಡಿ ಕೋಳಿ ಸಾಕಾಣಿಕೆಗೆ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ಹಾಗೂ ಕೋಳಿ ಸಾಕಾಣಿಕೆಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ತೈಲೂರು ಗ್ರಾಮದ ಪಶು ಚಿಕಿತ್ಸಾಲಯ ಆಸ್ಪತ್ರೆಗೆ ಭೇಟಿ ನೀಡಿದ ಅವರು ರಾಸುಗಳಿಗೆ ಕೃತಕ ಗರ್ಭಧಾರಣೆ ಮಾಡುತ್ತಿರುವ ಕುರಿತು ಹಾಗೂ ಕಾಲುಬಾಯಿ ಜ್ವರ ಲಸಿಕೆ ಹಾಕಿರುವ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಹೊರರೋಗಿ ವಹಿ ಹಾಗೂ ಚಿಕಿತ್ಸಾ ವಿವರಗಳ ವಹಿಗಳನ್ನು ಪರಿಶೀಲನೆ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…