ಮಂಡ್ಯ

ಕುಕ್ಕುಟ ಸಂಜೀವಿನಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ : ಕೆ.ಆರ್. ನಂದಿನಿ

ಮಂಡ್ಯ : ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು.

ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್ ಅವರ “ಗೌರಮ್ಮ ನಾಟಿ ಮೇಕೆ ಫಾರ್ಮ್” ಗೆ ಭೇಟಿ ನೀಡಿದ ವೇಳೆ ಅವರು ತಿಳಿಸಿದರು.

ಜಗದೀಶ್ ಅವರ ಫಾರ್ಮ್ ನಲ್ಲಿ ವಿವಿಧ ತಳಿಯ ಮೇಕೆಗಳ ಕುರಿತು ಮಾಹಿತಿ ಪಡೆದ ಅವರು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಾ ಲಾಭದ ಹಾದಿಯಲ್ಲಿ ಮುನ್ನಡೆದಿರುವ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಗದೀಶ್ ಅವರ ನಡೆ ಇತರ ಕೃಷಿಕರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ಕುಕ್ಕುಟ ಸಂಜೀವಿನಿ ಯೋಜನೆಯಡಿ ಕೋಳಿ ಸಾಕಾಣಿಕೆಗೆ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ಹಾಗೂ ಕೋಳಿ ಸಾಕಾಣಿಕೆಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತೈಲೂರು ಗ್ರಾಮದ ಪಶು ಚಿಕಿತ್ಸಾಲಯ ಆಸ್ಪತ್ರೆಗೆ ಭೇಟಿ ನೀಡಿದ ಅವರು ರಾಸುಗಳಿಗೆ ಕೃತಕ ಗರ್ಭಧಾರಣೆ ಮಾಡುತ್ತಿರುವ ಕುರಿತು ಹಾಗೂ ಕಾಲುಬಾಯಿ ಜ್ವರ ಲಸಿಕೆ ಹಾಕಿರುವ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಹೊರರೋಗಿ ವಹಿ ಹಾಗೂ ಚಿಕಿತ್ಸಾ ವಿವರಗಳ ವಹಿಗಳನ್ನು ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

11 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago