ಮಂಡ್ಯ

ಮಂಡ್ಯ| ಶಾಸಕ ರವಿಕುಮಾರ್‌ ಗಣಿಗ ವಿರುದ್ಧ ಪ್ರಗತಿಪರ ಸಂಘಟನೆ ಮುಖಂಡರ ಆಕ್ರೋಶ

ಮಂಡ್ಯ: ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗಳ ಬಗ್ಗೆ ಶಾಸಕ ರವಿಕುಮಾರ್ ಗಣಿಗ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದ ಪ್ರಗತಿಪರ ಸಂಘಟನೆಯ ಮುಖಂಡರು, ಶಾಸಕ ರವಿ ಕುಮಾರ್‌ ಗಣಿಗ ಅವರು ಒತ್ತಡಗಳಿಂದ ವಿವೇಕವಿಲ್ಲದೆ, ಆಲೋಚನೆ ಇಲ್ಲದೆ ಮಾತನಾಡಿದ್ದಾರೆ. ಕಳೆದ ಜೂನ್.6ರಂದು ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸರ್ಕಾರದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರೈತ ಸಂಘಟನೆಗಳ, ಗ್ರಾಮಸ್ಥರ, ಸಾರ್ವಜನಿಕರ ಸಭೆಯಲ್ಲಿ ಸರ್ವಾನುಮತದಿಂದ ಯೋಜನೆಗಳನ್ನು ರದ್ದುಪಡಿಸಲು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಶಾಸಕರು ಮನವರಿಕೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಶಾಸಕರು ಅಧಿಕಾರದಿಂದ ಮಾತನಾಡುತ್ತಿದ್ದಾರೆ, ಕಾವೇರಿ ಆರತಿ, ಅಮ್ಯೂಸ್ ಮೆಂಟ್ ಪಾರ್ಕ್ ಯೋಜನೆಗಳು ಭವಿಷ್ಯದಲ್ಲಿ ಕೆಆರ್‌ಎಸ್‌ ಅಣೆಕಟ್ಟು, ಅಚ್ಚುಕಟ್ಟು ಪ್ರದೇಶಗಳು, ರೈತರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಎಷ್ಟು ಅಪಾಯಕಾರಿ ಎಂಬುದನ್ನು ಅರ್ಥೈಸಿಕೊಳ್ಳಬೇಕು.

ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ನಿರ್ಧಾರಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದು ಶಾಸಕರಿಗೆ ಶೋಭೆ ತರುವುದಿಲ್ಲ. ಅಣೆಕಟ್ಟು, ನದಿ ಪ್ರದೇಶಗಳು, ಪ್ರವಾಸೋದ್ಯಮದ ಕೇಂದ್ರಗಳಲ್ಲ, ನಿಷೇಧಿತ ಪ್ರದೇಶಗಳಾಗಿವೆ ಎಂದರು. ನಂತರ ಕೆಆರ್‌ಎಸ್‌ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಗೆ ಪ್ರಯಾಣ ಬೆಳೆಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ಸುನಂದ ಜಯರಾಂ, ಕೆ.ಬೋರಯ್ಯ, ನಾಗಣ್ಣಗೌಡ, ಹೆಚ್.ಡಿ.ಜಯರಾಂ, ಎಸ್.ನಾರಾಯಣ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

10 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

11 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

11 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

11 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

11 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

12 hours ago