protest at mandya
ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.
ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ ಎಮ್ಮೆ,ಹಸು ಹಾಗೂ ಕರುಗಳಿಗೆ ಮೈಸೂರು ಸ್ಯಾಂಡಲ್ ನಿಂದ ಸ್ನಾನ ಮಾಡಿಸಿ ವಿಡಂಬನೆ ಮಾಡಲಾಗಿದೆ.
ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್ ಸೋಪ್ ನಲ್ಲಿ ಸ್ನಾನ ಮಾಡಿಸಿ ಪ್ರತಿಭಟನಾಕರಾರು ಆಕ್ರೋಶ ಹೊರ ಹಾಕಿದ್ದು, ರಾಜ್ಯದ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ಪರಭಾಷೆ ನಟಿಗೆ ಕೊಟ್ಟು ರಾಯಭಾರಿಯನ್ನಾಗಿ ಸರ್ಕಾರ ನೇಮಕ ಮಾಡಿ ರಾಜ್ಯದ ಪ್ರತಿಭಾವಂತರು, ಕಲಾವಿದರು ಹಾಗೂ ಯುವ ಪ್ರತಿಭೆಗಳಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ಸರ್ಕಾರ ಈ ಕೂಡಲೇ ತಮ್ಮನ್ನಾ ಭಾಟಿಯರನ್ನು ರಾಯಭಾರಿಯಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ ಸ್ಥಳೀಯ ಕಲಾವಿದರುಗಳಿಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪ್ತಿ ಮೈಸೂರು ಸ್ಯಾಂಡಲ್ ಸೋಪಿನಲ್ಲಿ ಜಾನುವಾರು ತೊಳೆಯುವ ಚಳುವಳಿ ವಿಸ್ತರಿಸುವ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…