protest at mandya
ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.
ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ ಎಮ್ಮೆ,ಹಸು ಹಾಗೂ ಕರುಗಳಿಗೆ ಮೈಸೂರು ಸ್ಯಾಂಡಲ್ ನಿಂದ ಸ್ನಾನ ಮಾಡಿಸಿ ವಿಡಂಬನೆ ಮಾಡಲಾಗಿದೆ.
ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್ ಸೋಪ್ ನಲ್ಲಿ ಸ್ನಾನ ಮಾಡಿಸಿ ಪ್ರತಿಭಟನಾಕರಾರು ಆಕ್ರೋಶ ಹೊರ ಹಾಕಿದ್ದು, ರಾಜ್ಯದ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ಪರಭಾಷೆ ನಟಿಗೆ ಕೊಟ್ಟು ರಾಯಭಾರಿಯನ್ನಾಗಿ ಸರ್ಕಾರ ನೇಮಕ ಮಾಡಿ ರಾಜ್ಯದ ಪ್ರತಿಭಾವಂತರು, ಕಲಾವಿದರು ಹಾಗೂ ಯುವ ಪ್ರತಿಭೆಗಳಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ಸರ್ಕಾರ ಈ ಕೂಡಲೇ ತಮ್ಮನ್ನಾ ಭಾಟಿಯರನ್ನು ರಾಯಭಾರಿಯಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ ಸ್ಥಳೀಯ ಕಲಾವಿದರುಗಳಿಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪ್ತಿ ಮೈಸೂರು ಸ್ಯಾಂಡಲ್ ಸೋಪಿನಲ್ಲಿ ಜಾನುವಾರು ತೊಳೆಯುವ ಚಳುವಳಿ ವಿಸ್ತರಿಸುವ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…