ಮಂಡ್ಯ

ಪರಭಾಷೆ ನಟಿಗೆ ರಾಯಭಾರಿ | ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್‌ ಸೋಪ್‌ನಿಂದ ಸ್ನಾನ ಮಾಡಿಸಿ ವಿನೂತನ ಪ್ರತಿಭಟನೆ

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.

ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ ಎಮ್ಮೆ,ಹಸು ಹಾಗೂ ಕರುಗಳಿಗೆ ಮೈಸೂರು ಸ್ಯಾಂಡಲ್ ನಿಂದ ಸ್ನಾನ ಮಾಡಿಸಿ ವಿಡಂಬನೆ ಮಾಡಲಾಗಿದೆ.

ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್ ಸೋಪ್ ನಲ್ಲಿ ಸ್ನಾನ ಮಾಡಿಸಿ ಪ್ರತಿಭಟನಾಕರಾರು ಆಕ್ರೋಶ ಹೊರ ಹಾಕಿದ್ದು, ರಾಜ್ಯದ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ಪರಭಾಷೆ ನಟಿಗೆ ಕೊಟ್ಟು ರಾಯಭಾರಿಯನ್ನಾಗಿ‌ ಸರ್ಕಾರ ನೇಮಕ ಮಾಡಿ ರಾಜ್ಯದ ಪ್ರತಿಭಾವಂತರು, ಕಲಾವಿದರು ಹಾಗೂ ಯುವ ಪ್ರತಿಭೆಗಳಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

ಸರ್ಕಾರ ಈ ಕೂಡಲೇ ತಮ್ಮನ್ನಾ ಭಾಟಿಯರನ್ನು ರಾಯಭಾರಿಯಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ ಸ್ಥಳೀಯ ಕಲಾವಿದರುಗಳಿಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪ್ತಿ ಮೈಸೂರು ಸ್ಯಾಂಡಲ್‌ ಸೋಪಿನಲ್ಲಿ ಜಾನುವಾರು ತೊಳೆಯುವ ಚಳುವಳಿ ವಿಸ್ತರಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago