ಮಂಡ್ಯ

ಕಾವೇರಿ ಆರತಿ,ಅಮ್ಯೂಸ್‌ಮೆಂಟ್‌ಗೆ ವಿರೋಧ ; ಕೆಆರ್‌ಎಸ್‌ನಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, ದಲಿತ, ಮಹಿಳಾ, ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತರು, ಕೆಆರ್‌ಎಸ್ ವ್ಯಾಪ್ತಿಯ ಗ್ರಾಮಸ್ಥರು, ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೊರಲ ವಿರೋಧವನ್ನೂ ಲೆಕ್ಕಿಸದೆ ಸರ್ಕಾರ ಕಾವೇರಿ ಆರತಿ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ದರ್ಪ, ದೌರ್ಜನ್ಯದ ರೀತಿಯಲ್ಲಿ ಮಾತನಾಡುತ್ತಿರುವುದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾಹಿತಿ ಹರಿಹರ ಪ್ರಿಯ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ಸವಾಲು ಹಾಕಿದ್ದಾರೆ. ರೈತರು ಎದ್ದರೆ ನಿಮಗೆ ಸರಿಯಾದ ಮಂಗಳಾರತಿ ಆಗುತ್ತೆ ಎಂದು ಖಡಕ್ ಎಚ್ಚರಿಕೆ ಕೊಟ್ಟರು.ಅಲ್ಲದೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ಕಾರಣ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಹೋದರ ಸೋತಿದ್ದರಿಂದ ಡಿ.ಕೆ.ಶಿವಕುಮಾರ್‌ಗೆ ಹುಚ್ಚು ಬಂದಿದೆ. 30 ವರ್ಷಗಳ ಕಾಲ ರಜೆಯನ್ನೇ ಹಾಕದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಐಪಿಎಸ್ ಅಧಿಕಾರಿ ದಯಾನಂದ್ ಅವರನ್ನು ಅಮಾನತುಗೊಳಿಸಿದ್ದೀರಿ ಎಂದು ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago