ಮಂಡ್ಯ

ಕಾವೇರಿ ಆರತಿ,ಅಮ್ಯೂಸ್‌ಮೆಂಟ್‌ಗೆ ವಿರೋಧ ; ಕೆಆರ್‌ಎಸ್‌ನಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, ದಲಿತ, ಮಹಿಳಾ, ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತರು, ಕೆಆರ್‌ಎಸ್ ವ್ಯಾಪ್ತಿಯ ಗ್ರಾಮಸ್ಥರು, ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೊರಲ ವಿರೋಧವನ್ನೂ ಲೆಕ್ಕಿಸದೆ ಸರ್ಕಾರ ಕಾವೇರಿ ಆರತಿ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ದರ್ಪ, ದೌರ್ಜನ್ಯದ ರೀತಿಯಲ್ಲಿ ಮಾತನಾಡುತ್ತಿರುವುದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾಹಿತಿ ಹರಿಹರ ಪ್ರಿಯ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ಸವಾಲು ಹಾಕಿದ್ದಾರೆ. ರೈತರು ಎದ್ದರೆ ನಿಮಗೆ ಸರಿಯಾದ ಮಂಗಳಾರತಿ ಆಗುತ್ತೆ ಎಂದು ಖಡಕ್ ಎಚ್ಚರಿಕೆ ಕೊಟ್ಟರು.ಅಲ್ಲದೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ಕಾರಣ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಹೋದರ ಸೋತಿದ್ದರಿಂದ ಡಿ.ಕೆ.ಶಿವಕುಮಾರ್‌ಗೆ ಹುಚ್ಚು ಬಂದಿದೆ. 30 ವರ್ಷಗಳ ಕಾಲ ರಜೆಯನ್ನೇ ಹಾಕದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಐಪಿಎಸ್ ಅಧಿಕಾರಿ ದಯಾನಂದ್ ಅವರನ್ನು ಅಮಾನತುಗೊಳಿಸಿದ್ದೀರಿ ಎಂದು ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

10 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

10 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

15 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

15 hours ago