ಮಂಡ್ಯ

ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ನಡೆಸಿದ ಕಾರ್ಯಕರ್ತೆಯರು,
ಮೈಕ್ರೋ ಫೈನಾನ್ಸ್‌ ಗಳ ಸಾಲದ ಸುಳಿಗೆ ಸಿಲುಕಿ ರಾಜ್ಯದಲ್ಲಿ ಮಹಿಳೆಯರು ಮತ್ತು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೆಚ್ಚಿನ ಬಡ್ಡಿ ಸುಲಿಗೆ, ಅಶ್ಲೀಲ ಪದ ಬಳಕೆ, ಹಣ ವಸೂಲಾತಿಗಾಗಿ ರೌಡಿಗಳ ಬಲ ಪ್ರಯೋಗದಂತಹ ಕ್ರೌರ್ಯಗಳು ಹೆಚ್ಚಾಗಿವೆ.

ಫೈನಾನ್ಸ್ ಸಂಸ್ಥೆಗಳು ಮಾತ್ರವಲ್ಲದೆ ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಕಂಪನಿಗಳು ಅನಿಯಂತ್ರಿತ ಠೇವಣಿಗಳ ಯೋಜನೆಯಡಿ ಅಧಿಕ ಬಡ್ಡಿಯ ಅಸೆ ತೋರಿಸಿ ಜನರಿಂದ ಹಣ ದೋಚಿ ವಂಚಿಸಿರುವ ಘಟನೆಗಳು ಕೂಡಾ ಬೆಳಕಿಗೆ ಬಂದಿವೆ. ಈ ಪ್ರಕರಣಗಳ ವಿರುದ್ಧವು ಕೂಡಾ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಮೋಸ ಹೋದ ಜನರಿಗೆ ಯಾವುದೆ ಪರಿಹಾರ ದೊರೆತಿಲ್ಲ. ಇದರ ಜೊತೆಗೆ ಮೀಟರ್ ಬಡ್ಡಿ ದಂದೆಗಳು ಜನಸಾಮಾನ್ಯರನ್ನು ರಕ್ತ ಹೀರುವ ಜಿಗಣೆಗಳಂತೆ ಬಾಧಿಸುತ್ತಿವೆ.

ಸಾಲದ ಸುಳಿಯಿಂದ ಪಾರು ಮಾಡಲು ಸುಗ್ರಿವಾಜ್ಞೆ ಹೊರಡಿಸಿದರೆ ಪ್ರಯೋಜನವಿಲ್ಲ. ಅಲ್ಲದೆ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ, ಮತ್ತು ಔದ್ಯೋಗಿಕವಾಗಿ ಸಬಲರಾಗಿ ಮಾಡದೆ ನೂರಾರು ಕಾನೂನು ಜಾರಿಮಾಡಿದರು ಪ್ರಯೋಜನವಿಲ್ಲ. ಇದನ್ನು ಅರಿತು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೂರ್ಣಿಮಾ, ಸಿದ್ದರಾಜು, ಕಮಲ, ಶಿಲ್ಪ ಬಿ ಎಸ್, ಲತಾ ಶಂಕರ್, ಪ್ರಿಯ ರಮೇಶ್, ಗಿರಿಜಾ, ಸುಮಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

2 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

2 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

2 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

2 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

2 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

2 hours ago