ಮಂಡ್ಯ

ರೈತರ ಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು : ರಾಗಿ ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಿರುವ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ಕಾರ್ಯಕರ್ತರು ತಲೆ ಮೇಲೆ ಪಾತ್ರೆ ಹೊತ್ತುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.

ತಾಲ್ಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಮಾವಣೆಗೊಂಡ ಸಂಘಟನೆ ಕಾರ್ಯಕರ್ತರು ಮದ್ದೂರು-ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿ ಖರೀದಿ ಕೇಂದ್ರದ ಅಽಕಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕೂಡಲೇ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿದರು.

ರಾಗಿ ಖರೀದಿ ಕೇಂದ್ರಕ್ಕೆ ರಾಗಿ ಸರಬರಾಜು ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಇದುವರೆಗೂ ಹಣ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದು, ತಾಲ್ಲೂಕಿನಾದ್ಯಂತ ಸುಮಾರು ೩೦೦ ಕೋಟಿ ರೂ.ಗಳಿಗೂ ಹೆಚ್ಚು ಬಾಕಿ ಉಳಿಸಿಕೊಂಡಿದ್ದಾರೆ. ಕೂಡಲೇ ಪಾವತಿಸುವ ಮೂಲಕ ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದರು.

ಒಂದು ವಾರದೊಳಗಾಗಿ ರೈತರ ಖಾತೆಗೆ ಹಣ ಜಮಾ ಮಾಡದಿದ್ದಲ್ಲಿ ಜನ ಜಾನುವಾರುಗಳೊಟ್ಟಿಗೆ ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಸೋ.ಶಿ.ಪ್ರಕಾಶ್, ಪ್ರಭುಲಿಂಗ, ಕೀಳಘಟ್ಟ ನಂಜುಂಡಯ್ಯ, ವೆಂಕಟೇಶ್, ಲಿಂಗರಾಜು, ರಾಮೇಗೌಡ, ಮಂಜು, ಚನ್ನಪ್ಪ, ರಮೇಶ್, ಸತ್ಯಾನಂದ, ಜಗದೀಶ್, ಚಿಕ್ಕಲಿಂಗಯ್ಯ, ನಿಂಗೇಗೌಡ, ಅಪ್ಪಾಜಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

4 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

5 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago