ಮಂಡ್ಯ

ರೈತರ ಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು : ರಾಗಿ ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಿರುವ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ಕಾರ್ಯಕರ್ತರು ತಲೆ ಮೇಲೆ ಪಾತ್ರೆ ಹೊತ್ತುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.

ತಾಲ್ಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಮಾವಣೆಗೊಂಡ ಸಂಘಟನೆ ಕಾರ್ಯಕರ್ತರು ಮದ್ದೂರು-ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿ ಖರೀದಿ ಕೇಂದ್ರದ ಅಽಕಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕೂಡಲೇ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿದರು.

ರಾಗಿ ಖರೀದಿ ಕೇಂದ್ರಕ್ಕೆ ರಾಗಿ ಸರಬರಾಜು ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಇದುವರೆಗೂ ಹಣ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದು, ತಾಲ್ಲೂಕಿನಾದ್ಯಂತ ಸುಮಾರು ೩೦೦ ಕೋಟಿ ರೂ.ಗಳಿಗೂ ಹೆಚ್ಚು ಬಾಕಿ ಉಳಿಸಿಕೊಂಡಿದ್ದಾರೆ. ಕೂಡಲೇ ಪಾವತಿಸುವ ಮೂಲಕ ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದರು.

ಒಂದು ವಾರದೊಳಗಾಗಿ ರೈತರ ಖಾತೆಗೆ ಹಣ ಜಮಾ ಮಾಡದಿದ್ದಲ್ಲಿ ಜನ ಜಾನುವಾರುಗಳೊಟ್ಟಿಗೆ ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಸೋ.ಶಿ.ಪ್ರಕಾಶ್, ಪ್ರಭುಲಿಂಗ, ಕೀಳಘಟ್ಟ ನಂಜುಂಡಯ್ಯ, ವೆಂಕಟೇಶ್, ಲಿಂಗರಾಜು, ರಾಮೇಗೌಡ, ಮಂಜು, ಚನ್ನಪ್ಪ, ರಮೇಶ್, ಸತ್ಯಾನಂದ, ಜಗದೀಶ್, ಚಿಕ್ಕಲಿಂಗಯ್ಯ, ನಿಂಗೇಗೌಡ, ಅಪ್ಪಾಜಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

36 mins ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

56 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

7 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

8 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

8 hours ago