ಮಂಡ್ಯ

ವಿ.ಸಿ ನಾಲೆಯ ಕೊನೆಭಾಗಕ್ಕೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಸುಮಾರು ಅರ್ಧಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯವಿಭಾಗದ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೇಯ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನ ನೀಡದೆ ವಂಚಿಸಿದ್ದಾರೆ, ರೈತರಿಗೆ ಮುಂಗಾರು ಆರಂಭವಾಗಿದ್ದು ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ,ಈಗಾಗಲೇ ಬೆಳದಿರುವ ಕಬ್ಬಿಗೆ ನಿರಲ್ಲದೆ ಒಣಗುತ್ತಿದ್ದು ಕೂಡಲೇ ಅಧಿಕಾರಿಗಳು ನೀರನ್ನು ಬಿಡಬೇಕು ಎಂದು ಆಗ್ರಹಿಸಿದರು.

ರೈತಸಂಘದ ಜಿಲ್ಲಾ ಖಜಾಂಚಿ ಕೆ.ಶೆಟ್ಟಹಳ್ಳಿ ರವಿಕುಮಾರ್ ಮಾತನಾಡಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕೊನೆಭಾಗಕ್ಕೆ ನೀರು ನೀಡದೆ ಕೃತಕ ಬರಗಾಲ ಸೃಷ್ಟಿಸಿದ್ದಾರೆ.ಕಾಮಗಾರಿ ಹೆಸರಿನಲ್ಲಿ ರೈತರಿಗೆ ನೀರು ನೀಡದೆ ಅನ್ಯಾಯವೇಸಾಗುತ್ತಿದ್ದರೆ ಕೂಡಲೇ ವಿ.ಸಿ ನಾಲೆ ಹಾಗೂ ಲೋಕಸರ ನಾಲೆಗಳ ಮೂಲಕ ಕೊನೆಭಾಗಕ್ಕೆ ನೀರುಣಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನಾ ವೇಳೆಯಲ್ಲಿ ಕೆ.ಎಂ ದೊಡ್ಡಿಯ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ರವರು ನೀರಾವರಿಯ ಇಲಾಖೆಯ ಅಭಿಯಂತರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ನೀರು ಹರಿಸಲು ಸಮ್ಮತಿಸಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಕೈ ಬಿಟ್ಟರು.

ಇದೆ ಸಂದರ್ಭದಲ್ಲಿ ಕರ್ನಾಟಕದ ರಾಜ್ಯ ರೈತ ಸಂಘದ ತಾಲೋಕು ಅಧ್ಯಕ್ಷ ವರಗೆರೆಹಳ್ಳಿ ಉಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಲಿಂಗಾಪ್ಪಾಜಿ, ಕಾರ್ಯದರ್ಶಿ ವಿನೋದ್ ಬಾಬು, ಕಳ್ಳಿಮೆಳ್ಳೆದೊಡ್ಡಿ ಸಿದ್ದರಾಜು,ಬನ್ನಹಳ್ಳಿ ರಮೇಶ್, ಮುಟ್ಟನಹಳ್ಳಿ ವೆಂಕಟೇಶ್,ಪಟೇಲ್ ಬೋರೇಗೌಡ, ದೇಶಿಗೌಡ,ಸಾವಿತ್ರಮ್ಮ,ನಾಗರತ್ನಮ್ಮ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

4 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

20 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

22 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

33 mins ago

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

1 hour ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

2 hours ago