ಮಂಡ್ಯ

ವಿ.ಸಿ ನಾಲೆಯ ಕೊನೆಭಾಗಕ್ಕೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಸುಮಾರು ಅರ್ಧಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯವಿಭಾಗದ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೇಯ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನ ನೀಡದೆ ವಂಚಿಸಿದ್ದಾರೆ, ರೈತರಿಗೆ ಮುಂಗಾರು ಆರಂಭವಾಗಿದ್ದು ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ,ಈಗಾಗಲೇ ಬೆಳದಿರುವ ಕಬ್ಬಿಗೆ ನಿರಲ್ಲದೆ ಒಣಗುತ್ತಿದ್ದು ಕೂಡಲೇ ಅಧಿಕಾರಿಗಳು ನೀರನ್ನು ಬಿಡಬೇಕು ಎಂದು ಆಗ್ರಹಿಸಿದರು.

ರೈತಸಂಘದ ಜಿಲ್ಲಾ ಖಜಾಂಚಿ ಕೆ.ಶೆಟ್ಟಹಳ್ಳಿ ರವಿಕುಮಾರ್ ಮಾತನಾಡಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕೊನೆಭಾಗಕ್ಕೆ ನೀರು ನೀಡದೆ ಕೃತಕ ಬರಗಾಲ ಸೃಷ್ಟಿಸಿದ್ದಾರೆ.ಕಾಮಗಾರಿ ಹೆಸರಿನಲ್ಲಿ ರೈತರಿಗೆ ನೀರು ನೀಡದೆ ಅನ್ಯಾಯವೇಸಾಗುತ್ತಿದ್ದರೆ ಕೂಡಲೇ ವಿ.ಸಿ ನಾಲೆ ಹಾಗೂ ಲೋಕಸರ ನಾಲೆಗಳ ಮೂಲಕ ಕೊನೆಭಾಗಕ್ಕೆ ನೀರುಣಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನಾ ವೇಳೆಯಲ್ಲಿ ಕೆ.ಎಂ ದೊಡ್ಡಿಯ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ರವರು ನೀರಾವರಿಯ ಇಲಾಖೆಯ ಅಭಿಯಂತರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ನೀರು ಹರಿಸಲು ಸಮ್ಮತಿಸಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಕೈ ಬಿಟ್ಟರು.

ಇದೆ ಸಂದರ್ಭದಲ್ಲಿ ಕರ್ನಾಟಕದ ರಾಜ್ಯ ರೈತ ಸಂಘದ ತಾಲೋಕು ಅಧ್ಯಕ್ಷ ವರಗೆರೆಹಳ್ಳಿ ಉಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಲಿಂಗಾಪ್ಪಾಜಿ, ಕಾರ್ಯದರ್ಶಿ ವಿನೋದ್ ಬಾಬು, ಕಳ್ಳಿಮೆಳ್ಳೆದೊಡ್ಡಿ ಸಿದ್ದರಾಜು,ಬನ್ನಹಳ್ಳಿ ರಮೇಶ್, ಮುಟ್ಟನಹಳ್ಳಿ ವೆಂಕಟೇಶ್,ಪಟೇಲ್ ಬೋರೇಗೌಡ, ದೇಶಿಗೌಡ,ಸಾವಿತ್ರಮ್ಮ,ನಾಗರತ್ನಮ್ಮ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

15 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

29 mins ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

46 mins ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

1 hour ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago