ಮಂಡ್ಯ

ವಿ.ಸಿ ನಾಲೆಯ ಕೊನೆಭಾಗಕ್ಕೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಸುಮಾರು ಅರ್ಧಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯವಿಭಾಗದ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೇಯ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನ ನೀಡದೆ ವಂಚಿಸಿದ್ದಾರೆ, ರೈತರಿಗೆ ಮುಂಗಾರು ಆರಂಭವಾಗಿದ್ದು ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ,ಈಗಾಗಲೇ ಬೆಳದಿರುವ ಕಬ್ಬಿಗೆ ನಿರಲ್ಲದೆ ಒಣಗುತ್ತಿದ್ದು ಕೂಡಲೇ ಅಧಿಕಾರಿಗಳು ನೀರನ್ನು ಬಿಡಬೇಕು ಎಂದು ಆಗ್ರಹಿಸಿದರು.

ರೈತಸಂಘದ ಜಿಲ್ಲಾ ಖಜಾಂಚಿ ಕೆ.ಶೆಟ್ಟಹಳ್ಳಿ ರವಿಕುಮಾರ್ ಮಾತನಾಡಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕೊನೆಭಾಗಕ್ಕೆ ನೀರು ನೀಡದೆ ಕೃತಕ ಬರಗಾಲ ಸೃಷ್ಟಿಸಿದ್ದಾರೆ.ಕಾಮಗಾರಿ ಹೆಸರಿನಲ್ಲಿ ರೈತರಿಗೆ ನೀರು ನೀಡದೆ ಅನ್ಯಾಯವೇಸಾಗುತ್ತಿದ್ದರೆ ಕೂಡಲೇ ವಿ.ಸಿ ನಾಲೆ ಹಾಗೂ ಲೋಕಸರ ನಾಲೆಗಳ ಮೂಲಕ ಕೊನೆಭಾಗಕ್ಕೆ ನೀರುಣಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನಾ ವೇಳೆಯಲ್ಲಿ ಕೆ.ಎಂ ದೊಡ್ಡಿಯ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ರವರು ನೀರಾವರಿಯ ಇಲಾಖೆಯ ಅಭಿಯಂತರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ನೀರು ಹರಿಸಲು ಸಮ್ಮತಿಸಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಕೈ ಬಿಟ್ಟರು.

ಇದೆ ಸಂದರ್ಭದಲ್ಲಿ ಕರ್ನಾಟಕದ ರಾಜ್ಯ ರೈತ ಸಂಘದ ತಾಲೋಕು ಅಧ್ಯಕ್ಷ ವರಗೆರೆಹಳ್ಳಿ ಉಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಲಿಂಗಾಪ್ಪಾಜಿ, ಕಾರ್ಯದರ್ಶಿ ವಿನೋದ್ ಬಾಬು, ಕಳ್ಳಿಮೆಳ್ಳೆದೊಡ್ಡಿ ಸಿದ್ದರಾಜು,ಬನ್ನಹಳ್ಳಿ ರಮೇಶ್, ಮುಟ್ಟನಹಳ್ಳಿ ವೆಂಕಟೇಶ್,ಪಟೇಲ್ ಬೋರೇಗೌಡ, ದೇಶಿಗೌಡ,ಸಾವಿತ್ರಮ್ಮ,ನಾಗರತ್ನಮ್ಮ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago