Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಜು.10ರಂದು ಸಂಸತ್ ಎದುರು ಪ್ರತಿಭಟನೆ : ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ಮಾಹಿತಿ

ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ತಿಳಿಸಿದರು.

ನಗರದ ಹೊಸಹಳ್ಳಿ ರಸ್ತೆಯ ಸಿಪಿಐಎಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಗವಿಕಲರು ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಹಿಂದೆ ಅಂಗವಿಕಲರಿಗಿದ್ದ ಶೇ.0.008 ಅನುದಾನವನ್ನು ಶೇ.0.004ಕ್ಕೆ ಇಳಿಸಿದೆ. ಇದು ಅಂಗವಿಕಲರ ಮತ್ತವರ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ. ಮನರೇಗಾದಲ್ಲಿ ಅಂಗವಿಕಲರಿಗಾಗಿ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ. ಶೇ.33 ಹಣ ಮೀಸಲು ಕಡಿಮೆ ಮಾಡಿದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ದಿಮೆಗಳು, ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆ ಇತ್ಯಾದಿಗಳು ಖಾಸಗಿಕರಣವಾಗುತ್ತಿದೆ. ಇದರಿಂದ ಅಂಗವಿಕಲರಿಗೆ ಕೆಲಸ ಸಿಗುತ್ತಿಲ್ಲ. ಹೀಗೆ ಅನೇಕ ರೀತಿಯ ಸಮಸ್ಯೆಗಳಲ್ಲಿ ಅಂಗವಿಕಲರು ನೊಂದಿದ್ದಾರೆ. ಹಾಗಾಗಿ ಅಂಗವಿಕಲರು ಮತ್ತು ಪಾಲಕರ ಒಕ್ಕೂಟ ಈ ಬಗ್ಗೆ ಆದ್ಯ ಗಮನ ನೀಡಿ ಹೋರಾಟ ಕೈಗೊಳ್ಳುತ್ತದೆ ಎಂದರು.
ಒಕ್ಕೂಟದ ಸಲಹೆಗಾರ ಜಿ.ಎನ್.ಯಶಸ್ವಿ, ವಲಯ ಕಾರ್ಯದರ್ಶಿ ಅರ್ಬುದ ರಾಜನ್, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!