ಮಂಡ್ಯ

ಜು.10ರಂದು ಸಂಸತ್ ಎದುರು ಪ್ರತಿಭಟನೆ : ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ಮಾಹಿತಿ

ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ತಿಳಿಸಿದರು.

ನಗರದ ಹೊಸಹಳ್ಳಿ ರಸ್ತೆಯ ಸಿಪಿಐಎಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಗವಿಕಲರು ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಹಿಂದೆ ಅಂಗವಿಕಲರಿಗಿದ್ದ ಶೇ.0.008 ಅನುದಾನವನ್ನು ಶೇ.0.004ಕ್ಕೆ ಇಳಿಸಿದೆ. ಇದು ಅಂಗವಿಕಲರ ಮತ್ತವರ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ. ಮನರೇಗಾದಲ್ಲಿ ಅಂಗವಿಕಲರಿಗಾಗಿ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ. ಶೇ.33 ಹಣ ಮೀಸಲು ಕಡಿಮೆ ಮಾಡಿದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ದಿಮೆಗಳು, ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆ ಇತ್ಯಾದಿಗಳು ಖಾಸಗಿಕರಣವಾಗುತ್ತಿದೆ. ಇದರಿಂದ ಅಂಗವಿಕಲರಿಗೆ ಕೆಲಸ ಸಿಗುತ್ತಿಲ್ಲ. ಹೀಗೆ ಅನೇಕ ರೀತಿಯ ಸಮಸ್ಯೆಗಳಲ್ಲಿ ಅಂಗವಿಕಲರು ನೊಂದಿದ್ದಾರೆ. ಹಾಗಾಗಿ ಅಂಗವಿಕಲರು ಮತ್ತು ಪಾಲಕರ ಒಕ್ಕೂಟ ಈ ಬಗ್ಗೆ ಆದ್ಯ ಗಮನ ನೀಡಿ ಹೋರಾಟ ಕೈಗೊಳ್ಳುತ್ತದೆ ಎಂದರು.
ಒಕ್ಕೂಟದ ಸಲಹೆಗಾರ ಜಿ.ಎನ್.ಯಶಸ್ವಿ, ವಲಯ ಕಾರ್ಯದರ್ಶಿ ಅರ್ಬುದ ರಾಜನ್, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಇತರರಿದ್ದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago