ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ತಿಳಿಸಿದರು.
ನಗರದ ಹೊಸಹಳ್ಳಿ ರಸ್ತೆಯ ಸಿಪಿಐಎಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಗವಿಕಲರು ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಹಿಂದೆ ಅಂಗವಿಕಲರಿಗಿದ್ದ ಶೇ.0.008 ಅನುದಾನವನ್ನು ಶೇ.0.004ಕ್ಕೆ ಇಳಿಸಿದೆ. ಇದು ಅಂಗವಿಕಲರ ಮತ್ತವರ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ. ಮನರೇಗಾದಲ್ಲಿ ಅಂಗವಿಕಲರಿಗಾಗಿ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ. ಶೇ.33 ಹಣ ಮೀಸಲು ಕಡಿಮೆ ಮಾಡಿದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉದ್ದಿಮೆಗಳು, ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆ ಇತ್ಯಾದಿಗಳು ಖಾಸಗಿಕರಣವಾಗುತ್ತಿದೆ. ಇದರಿಂದ ಅಂಗವಿಕಲರಿಗೆ ಕೆಲಸ ಸಿಗುತ್ತಿಲ್ಲ. ಹೀಗೆ ಅನೇಕ ರೀತಿಯ ಸಮಸ್ಯೆಗಳಲ್ಲಿ ಅಂಗವಿಕಲರು ನೊಂದಿದ್ದಾರೆ. ಹಾಗಾಗಿ ಅಂಗವಿಕಲರು ಮತ್ತು ಪಾಲಕರ ಒಕ್ಕೂಟ ಈ ಬಗ್ಗೆ ಆದ್ಯ ಗಮನ ನೀಡಿ ಹೋರಾಟ ಕೈಗೊಳ್ಳುತ್ತದೆ ಎಂದರು.
ಒಕ್ಕೂಟದ ಸಲಹೆಗಾರ ಜಿ.ಎನ್.ಯಶಸ್ವಿ, ವಲಯ ಕಾರ್ಯದರ್ಶಿ ಅರ್ಬುದ ರಾಜನ್, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಇತರರಿದ್ದರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…