ಮಂಡ್ಯ

ಜು.10ರಂದು ಸಂಸತ್ ಎದುರು ಪ್ರತಿಭಟನೆ : ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ಮಾಹಿತಿ

ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ತಿಳಿಸಿದರು.

ನಗರದ ಹೊಸಹಳ್ಳಿ ರಸ್ತೆಯ ಸಿಪಿಐಎಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಗವಿಕಲರು ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಹಿಂದೆ ಅಂಗವಿಕಲರಿಗಿದ್ದ ಶೇ.0.008 ಅನುದಾನವನ್ನು ಶೇ.0.004ಕ್ಕೆ ಇಳಿಸಿದೆ. ಇದು ಅಂಗವಿಕಲರ ಮತ್ತವರ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ. ಮನರೇಗಾದಲ್ಲಿ ಅಂಗವಿಕಲರಿಗಾಗಿ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ. ಶೇ.33 ಹಣ ಮೀಸಲು ಕಡಿಮೆ ಮಾಡಿದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ದಿಮೆಗಳು, ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆ ಇತ್ಯಾದಿಗಳು ಖಾಸಗಿಕರಣವಾಗುತ್ತಿದೆ. ಇದರಿಂದ ಅಂಗವಿಕಲರಿಗೆ ಕೆಲಸ ಸಿಗುತ್ತಿಲ್ಲ. ಹೀಗೆ ಅನೇಕ ರೀತಿಯ ಸಮಸ್ಯೆಗಳಲ್ಲಿ ಅಂಗವಿಕಲರು ನೊಂದಿದ್ದಾರೆ. ಹಾಗಾಗಿ ಅಂಗವಿಕಲರು ಮತ್ತು ಪಾಲಕರ ಒಕ್ಕೂಟ ಈ ಬಗ್ಗೆ ಆದ್ಯ ಗಮನ ನೀಡಿ ಹೋರಾಟ ಕೈಗೊಳ್ಳುತ್ತದೆ ಎಂದರು.
ಒಕ್ಕೂಟದ ಸಲಹೆಗಾರ ಜಿ.ಎನ್.ಯಶಸ್ವಿ, ವಲಯ ಕಾರ್ಯದರ್ಶಿ ಅರ್ಬುದ ರಾಜನ್, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಇತರರಿದ್ದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago