ಮಂಡ್ಯ

ಮದ್ದೂರಿನಲ್ಲಿ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ: ಪೊಲೀಸರಿಂದ ಲಘು ಲಾಠಿ ಪ್ರಹಾರ

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ.

ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ನಡೆದ ಘಟನೆಯಿಂದ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಾಗಿದ್ದು, 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.

ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯಿಂದ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

43 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago