ಮಂಡ್ಯ: ರೈತರ ಜೀವನಾಡಿ ಕೆಆರ್ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್ಎಸ್ ಅಣೆಕಟ್ಟೆ ಬಳಿ ಪ್ರತಿಭಟನಾ ಸಭೆಯನ್ನು ಕರೆಯಲಾಗಿದೆ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜು. 6ರ ಶುಕ್ರವಾರ ಮಂಡ್ಯದ ಜಿ.ಪಂ. ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಯನ್ನು ಕೈ ಬಿಡಬೇಕೆಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಕೆಆರ್ಎಸ್ ಅಣೆಕಟ್ಟೆ ಬಳಿ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…