ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಜಲಾಶಯದ ಎದುರು ನೂರಾರು ರೈತರು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟಿಸಿ, ಕರ್ನಾಟಕ ರಾಜ್ಯದ ರೈತರಿಗೆ ಆಗುತ್ತಿರುವ ನಿರಂತರ ಅನ್ಯಾಯ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5,000 ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕೆಂಬ ಆದೇಶ ಅವೈಜ್ಞಾನಿಕ ನಿರ್ಣಯವಾಗಿದೆ, ರಾಜ್ಯದಲ್ಲಿ ಬರಗಾಲದ ಸನ್ನಿವೇಶ ಸೃಷ್ಟಿಯಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದ್ದರೂ ತಮಿಳುನಾಡಿಗೆ ನೀರು ಬಿಡಬೇಕೆಂದು ಹೇಳಿರುವುದು ಸರಿಯಲ್ಲ ಎಂದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಇಲ್ಲಿನ ವಾಸ್ತವತೆಯನ್ನು ನ್ಯಾಯಾಲಯ ಮತ್ತು ಸಮಿತಿಗೆ ಮನದಟ್ಟು ಮಾಡಿಕೊಡದ ರಾಜ್ಯ ಸರ್ಕಾರ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…