ಮಂಡ್ಯ

ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜನ ಜಾಗೃತಿ

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥವನ್ನ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗೌರಿ ಗಣಪತಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಬಳಿಕ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಮಂಜುರಾಮ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕೆಂದು ತಿಳಿಸಿದರು.

ಹಾಗೆಯೇ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ರಾಘವೇಂದ್ರ ಅವರು ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಉತ್ತಮ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್, ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

8 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

8 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

12 hours ago