ಮಂಡ್ಯ

ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜನ ಜಾಗೃತಿ

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥವನ್ನ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗೌರಿ ಗಣಪತಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಬಳಿಕ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಮಂಜುರಾಮ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕೆಂದು ತಿಳಿಸಿದರು.

ಹಾಗೆಯೇ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ರಾಘವೇಂದ್ರ ಅವರು ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಉತ್ತಮ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್, ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago