ಮಂಡ್ಯ

ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜನ ಜಾಗೃತಿ

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥವನ್ನ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗೌರಿ ಗಣಪತಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಬಳಿಕ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಮಂಜುರಾಮ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕೆಂದು ತಿಳಿಸಿದರು.

ಹಾಗೆಯೇ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ರಾಘವೇಂದ್ರ ಅವರು ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಉತ್ತಮ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್, ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago