ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್ ಭವನದ ಬಳಿ ನಡೆದಿದೆ.
ತಬ್ರೇಜ್, ಮನ್ಸೂರ್ ಹಾಗೂ ಲೋಕೇಶ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೈಸೂರು ಕಡೆಯಿಂದ ಬೆಂಗಳೂರಿಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಕೆ.ಆರ್.ಪೇಟೆಯ ಕಿಕ್ಕೇರಿ ಮೂಲದ ಜಾನುವಾರುಗಳು ಇವಾಗಿದ್ದು, ಕಿಕ್ಕೇರಿಯಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಗೋವುಗಳಿದ್ದ ಕ್ಯಾಂಟರ್ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪುನೀತ್ ಕೆರೆಹಳ್ಳಿ ಭಾಗಿಯಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ಜೀವ ಉಳಿಸಿದ್ದಾರೆ. ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…
ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…
ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…