ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕೀಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು-ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಶ್ರೀ ಶಕ್ತಿ ಗುಂಪುಗಳು ಸದಸ್ಯರುಗಳಿಗೆ ಅರಿವು ಮೂಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಇರುವುದರಿಂದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಬೇಕು ಎಂದು ಹೇಳಿದರು.
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…