ಮಂಡ್ಯ

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕೀಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು-ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಶ್ರೀ ಶಕ್ತಿ ಗುಂಪುಗಳು ಸದಸ್ಯರುಗಳಿಗೆ ಅರಿವು ಮೂಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಇರುವುದರಿಂದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಬೇಕು ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago