ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರವು ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಹಿನ್ನೆಲೆ ನಾಳೆ(ಜು.14) ರಾಜ್ಯ ಸರರ್ಕಾರ ಕರೆದಿರುವ ಸರ್ವಪಕ್ಷ ಸಭೆ ಹಾಗೂ ಜು.15 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಸಂಸದರು ಹಾಗೂ ಶಾಸಕರು ಕಾವೇರಿ ನೀರು ಕುರಿತು ಸಮಗ್ರವಾಗಿ ಚರ್ಚಿಸಿ ನಿರ್ಣಯಕ್ಕೆ ಬರಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಮನವಿ ಸಲ್ಲಿಸಿದೆ.
ಕೇಂದ್ರ ಸಚಿವರು ಹಾಗೂ ಮಂಡ್ಯ ಸಂಸದರು ಆದ ಎಚ್.ಡಿ ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ರೈತ ಹಿತರಕ್ಷಣಾ ಸಮಿತಿಯ ನಿಯೋಗವು ಭೇಟಿ ಮಾಡಿ ಮನವಿ ಮಾಡಿತು.
ಕಾವೇರಿ ಕಣಿವೆ ಭಾಗದ ಜನರು ನೀರಿಲ್ಲದೆ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದು ಕಷ್ಟದ ಪರಿಸ್ಥಿತಿ. ಈ ಬಗ್ಗೆ ಸರ್ವಪಕ್ಷಗಳ ಸಭೆ ಹಾಗೂ ವಿಧಾನಸಭೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ಮಾಡಬೇಕು ಎಂದು ನಿಯೋಗವು ಒತ್ತಾಯಿಸಿತು.
ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನು ಸರಿಯಾಗಿ ನೀಡಲಿಲ್ಲ. ರೈತರು ಇರುವಷ್ಟು ಬೆಳೆಯನ್ನಾದರೂ ಉಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ ನದಿ ನೀರು ಪ್ರಾಧಿಕಾರವು ನೀರು ಹರಿಸಲು ಆದೇಶ ಮಾಡುವ ಮುನ್ನ ನದಿ ಪಾತ್ರದ ಪ್ರದೇಶವನ್ನು ವಿಕ್ಷಣೆ ಮಾಡಿ, ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲಾ ಸಂಸದರು, ಶಾಸಕರು ಸಭೆ ನಡೆಸಿ ಕಾವೇರಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿಬೇಕು ಎಂದು ಮನವಿ ಸಲ್ಲಿಸಲಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…