ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗುರುವಾರ(ಜು.18) ರೈತರು ಪ್ರತಿಭಟನಾ ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ರೈತರು, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತ್ರಿಗೊಳಿಸಬೇಕು. ಕಬ್ಬಿನ ಎಫ್ಆರ್ಪಿ ದರ ನಿಗದಿಪಡಿಸಬೇಕು. ಬರ ಪರಿಹಾರದಲ್ಲಿ ರಾಜ್ಯದ ಜನತೆಗೆ ತಾರತಮ್ಯವಾಗಿರುವುದನ್ನು ಸರಿಪಡಿಸಿ ರೈತರಿಗೆ ಪರಿಹಾರ ಪಾವತಿಗೆ ಮುಂದಾಗಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಲು ಕೇಂದ್ರಕ್ಕೆ ಒತ್ತಡ ಹೇರಬೇಕು. ಸಕ್ಕರೆ ಕಾರ್ಖನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕೆಆರ್ಎಸ್ನಲ್ಲಿ ಶಾಶ್ವತವಾಗಿ ಗಣಿಗಾರಿಕೆಯನ್ನು ನಿಷೇಧಿಸಬೇಕು. ಪರೀಕ್ಷಾರ್ಥಕ್ಕೂ ಸ್ಟೋಟ ಮಾಡಬಾರದು, ರೈತ ಆತ್ಮಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…