ಮಂಡ್ಯ

ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು: ಮಂಜುನಾಥ್

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಚನದರ್ಶನ ಮಿತ್ರ ಸತ್ಯ ಎಂಬ ಗ್ರಂಥ ಬಿಡುಗಡೆಯ ವೇಳೆ ವೀರಶೈವ ಪದ ಬಳಕೆಯ ಬದಲಾಗಿ ಲಿಂಗಾಯತ ಪದ ಬಳಸುವಂತೆ ಹೇಳಿದಾಗ ಈ ರೀತಿಯ ಅನುಚಿತ ವರ್ತನೆ ತೋರಿದ್ದಾರೆ ಎಂದು ಕಿಡಿ ಕಾರಿದರು.

ಬಸವಣ್ಣರನ್ನು ವಿಶ್ವಗುರು ಎಂದು ಇಡೀ ವಿಶ್ವವೇ ಒಪ್ಪಿದೆ ರಾಜ್ಯ ಸರ್ಕಾರವೂ ಇಲ್ಲಾ ಇಲಾಖೆಗಳ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಸೂಚಿಸಿದೆ. ರಂಭಾಪುರ ಕೇಂದಾರನಾಥ್ ಶ್ರೀ ಬಸವ ಜಯಂತಿ ಆಚರಿಸದೇ, ಬಸವಣ್ಣನವರ ಭಾವಚಿತ್ರ ಅಳವಡಿಸದೇ ಧರ್ಮದ್ರೋಹ ಕೆಲಸ ಮಾಡುತ್ತಿದ್ದಾರೆ ಎಂದು ದೂಡಿದರು.

ಹಿರಿಯ ಸಾತಿಗಳ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಲ್ಲದೇ ಲಿಂಗಾಯತ ಧರ್ಮ ಒಂದು ಧರ್ಮವೇ ಅಲ್ಲ ಎಂಬ ಅವಿವೇಕತನದ ಮಾತುಗಳನ್ನು ಆಡಿದ್ದಾರೆ.

ಪುರಾಣವನ್ನೇ ಇತಿಹಾಸ ಎಂದು ಅವರು ತಿಳಿದಿದ್ದು, ಬಸವಣ್ಣನವರ ವಚನಗಳು, ತತ್ವಗಳನ್ನು ತಿಳಿದು ಲಿಂಗಾಯತ ಧರ್ಮವನ್ನು ಸೇರಿಕೊಳ್ಳಿ. ಇಲ್ಲವಾದಲ್ಲಿ ಜನರಲ್ಲಿ ಗೊಂದಲ ಸೃಷ್ಠಿಸುವುದನ್ನು ಬಿಟ್ಟು, ಪಾಡಿಗೆ ನೀವು ಇದ್ದುಬಿಡಿ ಎಂದು ತಾಕೀತು ಮಾಡಿದರು.

ಗೋಷ್ಠಿಯಲ್ಲಿ ಕಲ್ಯಾಣ ಬಸವೇಶ್ವರ ಮಠದ ಓಂಕಾರಶ್ರೀ, ಶಿವಲಿಂಗಪ್ಪ, ಬೆಳಪ್ಪ, ಎಲ್.ಡಿ.ನಂದೀಶ್ ಇದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

2 mins ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

2 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

2 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

15 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

17 hours ago