ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಚನದರ್ಶನ ಮಿತ್ರ ಸತ್ಯ ಎಂಬ ಗ್ರಂಥ ಬಿಡುಗಡೆಯ ವೇಳೆ ವೀರಶೈವ ಪದ ಬಳಕೆಯ ಬದಲಾಗಿ ಲಿಂಗಾಯತ ಪದ ಬಳಸುವಂತೆ ಹೇಳಿದಾಗ ಈ ರೀತಿಯ ಅನುಚಿತ ವರ್ತನೆ ತೋರಿದ್ದಾರೆ ಎಂದು ಕಿಡಿ ಕಾರಿದರು.
ಬಸವಣ್ಣರನ್ನು ವಿಶ್ವಗುರು ಎಂದು ಇಡೀ ವಿಶ್ವವೇ ಒಪ್ಪಿದೆ ರಾಜ್ಯ ಸರ್ಕಾರವೂ ಇಲ್ಲಾ ಇಲಾಖೆಗಳ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಸೂಚಿಸಿದೆ. ರಂಭಾಪುರ ಕೇಂದಾರನಾಥ್ ಶ್ರೀ ಬಸವ ಜಯಂತಿ ಆಚರಿಸದೇ, ಬಸವಣ್ಣನವರ ಭಾವಚಿತ್ರ ಅಳವಡಿಸದೇ ಧರ್ಮದ್ರೋಹ ಕೆಲಸ ಮಾಡುತ್ತಿದ್ದಾರೆ ಎಂದು ದೂಡಿದರು.
ಹಿರಿಯ ಸಾತಿಗಳ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಲ್ಲದೇ ಲಿಂಗಾಯತ ಧರ್ಮ ಒಂದು ಧರ್ಮವೇ ಅಲ್ಲ ಎಂಬ ಅವಿವೇಕತನದ ಮಾತುಗಳನ್ನು ಆಡಿದ್ದಾರೆ.
ಪುರಾಣವನ್ನೇ ಇತಿಹಾಸ ಎಂದು ಅವರು ತಿಳಿದಿದ್ದು, ಬಸವಣ್ಣನವರ ವಚನಗಳು, ತತ್ವಗಳನ್ನು ತಿಳಿದು ಲಿಂಗಾಯತ ಧರ್ಮವನ್ನು ಸೇರಿಕೊಳ್ಳಿ. ಇಲ್ಲವಾದಲ್ಲಿ ಜನರಲ್ಲಿ ಗೊಂದಲ ಸೃಷ್ಠಿಸುವುದನ್ನು ಬಿಟ್ಟು, ಪಾಡಿಗೆ ನೀವು ಇದ್ದುಬಿಡಿ ಎಂದು ತಾಕೀತು ಮಾಡಿದರು.
ಗೋಷ್ಠಿಯಲ್ಲಿ ಕಲ್ಯಾಣ ಬಸವೇಶ್ವರ ಮಠದ ಓಂಕಾರಶ್ರೀ, ಶಿವಲಿಂಗಪ್ಪ, ಬೆಳಪ್ಪ, ಎಲ್.ಡಿ.ನಂದೀಶ್ ಇದ್ದರು.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…