ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಚನದರ್ಶನ ಮಿತ್ರ ಸತ್ಯ ಎಂಬ ಗ್ರಂಥ ಬಿಡುಗಡೆಯ ವೇಳೆ ವೀರಶೈವ ಪದ ಬಳಕೆಯ ಬದಲಾಗಿ ಲಿಂಗಾಯತ ಪದ ಬಳಸುವಂತೆ ಹೇಳಿದಾಗ ಈ ರೀತಿಯ ಅನುಚಿತ ವರ್ತನೆ ತೋರಿದ್ದಾರೆ ಎಂದು ಕಿಡಿ ಕಾರಿದರು.
ಬಸವಣ್ಣರನ್ನು ವಿಶ್ವಗುರು ಎಂದು ಇಡೀ ವಿಶ್ವವೇ ಒಪ್ಪಿದೆ ರಾಜ್ಯ ಸರ್ಕಾರವೂ ಇಲ್ಲಾ ಇಲಾಖೆಗಳ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಸೂಚಿಸಿದೆ. ರಂಭಾಪುರ ಕೇಂದಾರನಾಥ್ ಶ್ರೀ ಬಸವ ಜಯಂತಿ ಆಚರಿಸದೇ, ಬಸವಣ್ಣನವರ ಭಾವಚಿತ್ರ ಅಳವಡಿಸದೇ ಧರ್ಮದ್ರೋಹ ಕೆಲಸ ಮಾಡುತ್ತಿದ್ದಾರೆ ಎಂದು ದೂಡಿದರು.
ಹಿರಿಯ ಸಾತಿಗಳ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಲ್ಲದೇ ಲಿಂಗಾಯತ ಧರ್ಮ ಒಂದು ಧರ್ಮವೇ ಅಲ್ಲ ಎಂಬ ಅವಿವೇಕತನದ ಮಾತುಗಳನ್ನು ಆಡಿದ್ದಾರೆ.
ಪುರಾಣವನ್ನೇ ಇತಿಹಾಸ ಎಂದು ಅವರು ತಿಳಿದಿದ್ದು, ಬಸವಣ್ಣನವರ ವಚನಗಳು, ತತ್ವಗಳನ್ನು ತಿಳಿದು ಲಿಂಗಾಯತ ಧರ್ಮವನ್ನು ಸೇರಿಕೊಳ್ಳಿ. ಇಲ್ಲವಾದಲ್ಲಿ ಜನರಲ್ಲಿ ಗೊಂದಲ ಸೃಷ್ಠಿಸುವುದನ್ನು ಬಿಟ್ಟು, ಪಾಡಿಗೆ ನೀವು ಇದ್ದುಬಿಡಿ ಎಂದು ತಾಕೀತು ಮಾಡಿದರು.
ಗೋಷ್ಠಿಯಲ್ಲಿ ಕಲ್ಯಾಣ ಬಸವೇಶ್ವರ ಮಠದ ಓಂಕಾರಶ್ರೀ, ಶಿವಲಿಂಗಪ್ಪ, ಬೆಳಪ್ಪ, ಎಲ್.ಡಿ.ನಂದೀಶ್ ಇದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…