ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು.
ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು ಗೌತನ ಋಷಿಗೆ ಶ್ರೀರಂಗನಾಥಸ್ವಾಮಿ ದರ್ಶನ ನೀಡಿದ ರಂಗಜಯಂತಿ ಪ್ರಯುಕ್ತ ಮೈಸೂರಿನ ರಂಗಮುಡಿ ಸಮಿತಿಯಿಂದ ಹಮ್ಮಿಕೊಂಡಿದ್ದ ಉತ್ಸವದ ಹಿನ್ನೆಲೆಯಲ್ಲಿ ಶ್ರೀರಂಗನಾಥಸ್ವಾಮಿಯ ಸಾಲಿಗ್ರಾಮ ಮೂರ್ತಿಗೆ ವಿವಿಧ ಅಭಿಷೇಕ ನೆರವೇರಿಸಿ ಮಹಾಮಂಗಳಾರತಿ ಅರ್ಪಿಸಿ ವರ್ಷಕ್ಕೆ ಮೂರು ಬಾರಿ ಮಾತ್ರ ಸಿಗುವ ನಿಜಪಾದ ದರ್ಶನದೊಂದಿಗೆ ದೇವರ ವೀಕ್ಷಣೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ ಸಹಸ್ರಾರು ಜನರು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.
ಗುರುವಾರ ಸಂಜೆ ಪಟ್ಟಣದ ಉಪ ಖಜಾನೆಯಿಂದ ತರಿಸಲಾದ ವಜ್ರ ಖಚಿತ ಚಿನ್ನದ ಕಿರೀಟವನ್ನು ರಂಗನಾಥಸ್ವಾಮಿಗೆ ಧಾರಣೆ ಮಾಡಿ ಪಲ್ಲಕ್ಕಿ ಮೇಲಿರಿಸಿದ ಬಳಿಕ ಪಟ್ಟಣದ ರಾಜಬೀದಿ, ಪೂರ್ಣಯ್ಯ ಬೀದಿ, ಉತ್ತರಾಧಿ ಮಠ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಉತ್ಸವ ಸಾಗಿದ ಬೀದಿಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಉತ್ಸವಕ್ಕೆ ವೀರಗಾಸೆ ಸೇರಿದಂತೆ ಜಾನಪದ ಕಲಾತಂಡಗಳು ಮೆರುಗು ನೀಡಿದವು.
ಶ್ರೀರಂಗನಾಥಸ್ವಾಮಿ ಹಾಗೂ ರಂಗನಾಯಕಿ ಅಮ್ಮನವರ ವಿಗ್ರಹಕ್ಕೆ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕೇರಳ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು.
ರಂಗಮುಡಿ ಉತ್ಸವಕ್ಕೆ ಕ್ಷೇತ್ರದ ಶಾಸಕರ ಪತ್ನಿ ಸುಮತಿ ರಮೇಶ್ ಬಂಡಿಸಿದ್ದೇಗೌಡ ಅವರ ಸಮ್ಮುಖದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಚಾಲನೆ ನೀಡಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್, ಸದಸ್ಯರಾದ ಆಶಾಲತಾ ಪುಟ್ಟೇಗೌಡ, ಕಮಲಮ್ಮ, ಗುರು ನಾಗೇಂದ್ರದತ್, ಸುಬ್ರಹ್ಮಣ್ಯ, ಸೇತುವೆ ಸತೀಶ್, ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…