ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು.
ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು ಗೌತನ ಋಷಿಗೆ ಶ್ರೀರಂಗನಾಥಸ್ವಾಮಿ ದರ್ಶನ ನೀಡಿದ ರಂಗಜಯಂತಿ ಪ್ರಯುಕ್ತ ಮೈಸೂರಿನ ರಂಗಮುಡಿ ಸಮಿತಿಯಿಂದ ಹಮ್ಮಿಕೊಂಡಿದ್ದ ಉತ್ಸವದ ಹಿನ್ನೆಲೆಯಲ್ಲಿ ಶ್ರೀರಂಗನಾಥಸ್ವಾಮಿಯ ಸಾಲಿಗ್ರಾಮ ಮೂರ್ತಿಗೆ ವಿವಿಧ ಅಭಿಷೇಕ ನೆರವೇರಿಸಿ ಮಹಾಮಂಗಳಾರತಿ ಅರ್ಪಿಸಿ ವರ್ಷಕ್ಕೆ ಮೂರು ಬಾರಿ ಮಾತ್ರ ಸಿಗುವ ನಿಜಪಾದ ದರ್ಶನದೊಂದಿಗೆ ದೇವರ ವೀಕ್ಷಣೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ ಸಹಸ್ರಾರು ಜನರು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.
ಗುರುವಾರ ಸಂಜೆ ಪಟ್ಟಣದ ಉಪ ಖಜಾನೆಯಿಂದ ತರಿಸಲಾದ ವಜ್ರ ಖಚಿತ ಚಿನ್ನದ ಕಿರೀಟವನ್ನು ರಂಗನಾಥಸ್ವಾಮಿಗೆ ಧಾರಣೆ ಮಾಡಿ ಪಲ್ಲಕ್ಕಿ ಮೇಲಿರಿಸಿದ ಬಳಿಕ ಪಟ್ಟಣದ ರಾಜಬೀದಿ, ಪೂರ್ಣಯ್ಯ ಬೀದಿ, ಉತ್ತರಾಧಿ ಮಠ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಉತ್ಸವ ಸಾಗಿದ ಬೀದಿಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಉತ್ಸವಕ್ಕೆ ವೀರಗಾಸೆ ಸೇರಿದಂತೆ ಜಾನಪದ ಕಲಾತಂಡಗಳು ಮೆರುಗು ನೀಡಿದವು.
ಶ್ರೀರಂಗನಾಥಸ್ವಾಮಿ ಹಾಗೂ ರಂಗನಾಯಕಿ ಅಮ್ಮನವರ ವಿಗ್ರಹಕ್ಕೆ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕೇರಳ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು.
ರಂಗಮುಡಿ ಉತ್ಸವಕ್ಕೆ ಕ್ಷೇತ್ರದ ಶಾಸಕರ ಪತ್ನಿ ಸುಮತಿ ರಮೇಶ್ ಬಂಡಿಸಿದ್ದೇಗೌಡ ಅವರ ಸಮ್ಮುಖದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಚಾಲನೆ ನೀಡಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್, ಸದಸ್ಯರಾದ ಆಶಾಲತಾ ಪುಟ್ಟೇಗೌಡ, ಕಮಲಮ್ಮ, ಗುರು ನಾಗೇಂದ್ರದತ್, ಸುಬ್ರಹ್ಮಣ್ಯ, ಸೇತುವೆ ಸತೀಶ್, ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…