ಭಾರತೀನಗರ : ಇಲ್ಲಿಗೆ ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮವೊಂದರ ಸಿದ್ದರಾಮು (೬೫) ಎಂಬಾತನೇ ಅತ್ಯಾಚಾರ ನಡೆಸಿದನೆಂದು ಹೇಳಲಾಗಿದೆ.
ದೊಡ್ಡಕುಳ್ಳಯ್ಯ ಎಂಬವರ ಮಗ ರಾಜು ಎಂಬಾತನ ಪತ್ನಿ ಗೌರಮ್ಮ ಎಂಬವರು ದೂರು ನೀಡಿದ್ದು, ನಾನು ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ೪ನೇ ತರಗತಿ ಓದುತ್ತಿರುವ ನನ್ನ ಮಗಳಿಗೆ ಒಬ್ಬಟ್ಟು ಕೊಡುವುದಾಗಿ ಪುಸಲಾಯಿಸಿ, ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ.
ನಾನು ಕೆಲಸ ಮುಗಿಸಿ ಮನೆಗೆ ಬಂದಾಗ ಮಗಳು ಅಳುತ್ತಿದ್ದು, ಈ ಬಗ್ಗೆ ವಿಚಾರಿಸಿದಾಗ ನಡೆದ ಸಂಗತಿಯನ್ನು ತಿಳಿಸಿದ್ದಾಳೆ. ಹಾಗಾಗಿ ಸಿದ್ದರಾಮು ಮೇಲೆ ಕ್ರಮ ಕೈಗೊಳ್ಳಬೇಕೆಂದು ಗೌರಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





