ಮಂಡ್ಯ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಲೆಮಾರಿ ಸಮುದಾಯದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಪೋಷಕರ ವಿರುದ್ಧ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊರಮ ಜನಾಂಗದ ರಕ್ಷಿತಾ ಅತ್ಯಾಚಾರಕ್ಕೆ ಒಳಗಾಗಿರುವ ನತದೃಷ್ಟ ಬುದ್ಧಿಮಾಂದ್ಯ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಅಶೋಕ್ ಅಲಿಯಾಸ್ ಬಾಬು ಎಂಬುವರ ಮಗ ಪ್ರೀತಂ ಬುದ್ದಿ ಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ.

ಯುವತಿಯ ತಂದೆ ಸುರೇಶ್ ಮತ್ತು ಭಾಗ್ಯಮ್ಮ ಶುಕ್ರವಾರ ತಮ್ಮ ಸಂಬಂಧಿಕರ ಅಂತ್ಯಕ್ರಿಯೆಗಾಗಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಒಬ್ಬಂಟಿಯಾಗಿದ್ದನ್ನು ಅರಿತ ಕಾಮುಕ ಪ್ರೀತಂ ಏಕಾಏಕಿ ಯುವತಿಯ ಮನೆಗೆ ನುಗ್ಗಿ ಮನಸೋ ಇಚ್ಛೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ. ಯುವತಿ ಜೋರಾಗಿ ಚೀರಾಡುತ್ತಿದ್ದಾಗ ನೆರೆಹೊರೆಯವರು ಬಂದು ಆಕೆಗೆ ಸಮಾಧಾನಪಡಿಸಿ ಆಕೆಯ ಪೋಷಕರಿಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಅತ್ಯಾಚಾರ ಮಾಡಿದ ರಾಕ್ಷಸ ಪ್ರೀತಮನ ಪೋಷಕರನ್ನು ಕೇಳಲು ಹೋದಾಗ ಅತ್ಯಾಚಾರಿ ತಂದೆ, ತಾಯಿ ಮತ್ತಿರರು ಸಂತ್ರಸ್ತೆ ಪೋಷಕರನ್ನು ಹೀನಾಯವಾಗಿ ನಿಂದಿಸಿ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಪಾದಿಸಲಾಗಿದೆ.

ಘಟನೆ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಿ ಪ್ರೀತಂ ಸೇರಿ ನಾಲ್ವರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಸಂಬಂಧ ಘಟನಾ ಸ್ಥಳಕ್ಕೆ ಡಿಎಸ್ಪಿ ಚಲುವರಾಜು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಕೆಎಂಎಸ್ ಮುಖಂಡರ ಭೇಟಿ
ಕರಿಕ್ಯಾತನಹಳ್ಳಿ ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶನಿವಾರ ಎಕೆಎಂಎಸ್ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ವಕೀಲ ಕಿರಣಕುಮಾರ್ ಕೊತ್ತಗೆರೆ, ಮೈಸೂರು ಜಿಲ್ಲಾ ಮುಖಂಡ ಕೊಡಗಳ್ಳಿ ರವಿಕುಮಾರ್, ಮಂಡ್ಯ ಜಿಲ್ಲಾ ಎಕೆಎಂಎಸ್ ಮುಖಂಡರಾದ ಗಂಗರಹಳ್ಳಿ ಸುರೇಶ್, ಪಡುವಲ ಪಟ್ಟಣ ನಂಜುಂಡಶೆಟ್ಟಿ ಮತ್ತಿತರರ ನೇತೃತ್ವದಲ್ಲಿ ಸಭೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ನಂತರ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಡಿಎಸ್ಪಿ ಚಲುವರಾಜು ಮತ್ತಿತರರೊಂದಿಗೆ ಚರ್ಚಿಸಿ ಸಂತ್ರಸ್ತೆ ಕುಟುಂಬಕ್ಕೆ ಶೀಘ್ರ ಹಾಗೂ ಅಗತ್ಯ ಕಾನೂನು ಬೆಂಬಲ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

9 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

10 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

10 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

11 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

12 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

20 hours ago