ಮಂಡ್ಯ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಲೆಮಾರಿ ಸಮುದಾಯದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಪೋಷಕರ ವಿರುದ್ಧ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊರಮ ಜನಾಂಗದ ರಕ್ಷಿತಾ ಅತ್ಯಾಚಾರಕ್ಕೆ ಒಳಗಾಗಿರುವ ನತದೃಷ್ಟ ಬುದ್ಧಿಮಾಂದ್ಯ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಅಶೋಕ್ ಅಲಿಯಾಸ್ ಬಾಬು ಎಂಬುವರ ಮಗ ಪ್ರೀತಂ ಬುದ್ದಿ ಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ.

ಯುವತಿಯ ತಂದೆ ಸುರೇಶ್ ಮತ್ತು ಭಾಗ್ಯಮ್ಮ ಶುಕ್ರವಾರ ತಮ್ಮ ಸಂಬಂಧಿಕರ ಅಂತ್ಯಕ್ರಿಯೆಗಾಗಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಒಬ್ಬಂಟಿಯಾಗಿದ್ದನ್ನು ಅರಿತ ಕಾಮುಕ ಪ್ರೀತಂ ಏಕಾಏಕಿ ಯುವತಿಯ ಮನೆಗೆ ನುಗ್ಗಿ ಮನಸೋ ಇಚ್ಛೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ. ಯುವತಿ ಜೋರಾಗಿ ಚೀರಾಡುತ್ತಿದ್ದಾಗ ನೆರೆಹೊರೆಯವರು ಬಂದು ಆಕೆಗೆ ಸಮಾಧಾನಪಡಿಸಿ ಆಕೆಯ ಪೋಷಕರಿಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಅತ್ಯಾಚಾರ ಮಾಡಿದ ರಾಕ್ಷಸ ಪ್ರೀತಮನ ಪೋಷಕರನ್ನು ಕೇಳಲು ಹೋದಾಗ ಅತ್ಯಾಚಾರಿ ತಂದೆ, ತಾಯಿ ಮತ್ತಿರರು ಸಂತ್ರಸ್ತೆ ಪೋಷಕರನ್ನು ಹೀನಾಯವಾಗಿ ನಿಂದಿಸಿ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಪಾದಿಸಲಾಗಿದೆ.

ಘಟನೆ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಿ ಪ್ರೀತಂ ಸೇರಿ ನಾಲ್ವರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಸಂಬಂಧ ಘಟನಾ ಸ್ಥಳಕ್ಕೆ ಡಿಎಸ್ಪಿ ಚಲುವರಾಜು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಕೆಎಂಎಸ್ ಮುಖಂಡರ ಭೇಟಿ
ಕರಿಕ್ಯಾತನಹಳ್ಳಿ ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶನಿವಾರ ಎಕೆಎಂಎಸ್ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ವಕೀಲ ಕಿರಣಕುಮಾರ್ ಕೊತ್ತಗೆರೆ, ಮೈಸೂರು ಜಿಲ್ಲಾ ಮುಖಂಡ ಕೊಡಗಳ್ಳಿ ರವಿಕುಮಾರ್, ಮಂಡ್ಯ ಜಿಲ್ಲಾ ಎಕೆಎಂಎಸ್ ಮುಖಂಡರಾದ ಗಂಗರಹಳ್ಳಿ ಸುರೇಶ್, ಪಡುವಲ ಪಟ್ಟಣ ನಂಜುಂಡಶೆಟ್ಟಿ ಮತ್ತಿತರರ ನೇತೃತ್ವದಲ್ಲಿ ಸಭೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ನಂತರ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಡಿಎಸ್ಪಿ ಚಲುವರಾಜು ಮತ್ತಿತರರೊಂದಿಗೆ ಚರ್ಚಿಸಿ ಸಂತ್ರಸ್ತೆ ಕುಟುಂಬಕ್ಕೆ ಶೀಘ್ರ ಹಾಗೂ ಅಗತ್ಯ ಕಾನೂನು ಬೆಂಬಲ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago