ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಕಳ್ಳ ಭಟ್ಟಿ ದಂಧೆ ನಡೆಯುತ್ತಿಲ್ಲ ಎಂದು ಹೇಳಿದರು.
ಸೇಂದಿ ಮಾರಾಟ ಮಾಡದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಹಾಗೂ ಅತಂಹ ಜಾಗಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇಂದಿ ಮಾರಾಟ ಎರಡನ್ನು ನಿಲ್ಲಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 671 ಅಕ್ರಮ ಮದ್ಯ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದರು.
ಸ್ಲಂ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಆಗದಂತೆ ಹಾಗೂ ಗಾಂಜಾ ಮಾರಾಟ ಮಾಡದಂತೆ ಮಾಡುವ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಹಾಗೂ ಆ ಸ್ಥಳಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ:-ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ
ಕಳೆದ ವರ್ಷ 33 ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಸದರಿ ವರ್ಷ ಆರು ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಅರಣ್ಯ ಪ್ರದೇಶ ಹಾಗೂ ಬೆಳೆಗಳ ನಡುವೆ ಗಾಂಜಾ ಬೆಳೆದಿರುವ ಸಾಧ್ಯತೆ ಇರುತ್ತದೆ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರೈತರಿಗೆ ಗಾಂಜಾ ಬೆಳೆಯುವುದು ತಪ್ಪು ಹಾಗೂ ಅದರಿಂದ ಎದುರಿಸಬೇಕಾದ ಪರಿಣಾಮಗಳನ್ನು ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಡಿಪ್ಲೋಮಾ ಪದವಿ ಕಾಲೇಜುಗಳು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಗಾಂಜಾ ಕುರಿತಾಗಿ ಹಾಗೂ ಅದರ ದುಷ್ಪರಿಣಾಮಗಳ ಕುರಿತಾಗಿ ಅರಿವು ಮೂಡಿಸಿ. ಗ್ರಾಮ ಸಭೆಗಳಲ್ಲಿ ಜನರಿಗೆ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟದ ಕುರಿತಾಗಿ ಅರಿವು ಮೂಡಿಸಿ. ಅಬಕಾರಿ ಇಲಾಖೆ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ ಅಕ್ರಮ ಮಧ್ಯೆ ಗಾಂಜಾ ಹಾಗೂ ಡ್ರಗ್ಸ್ ನಂತಹ ಮಾದಕ ಪದಾರ್ಥಗಳು ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಎಂದು ಹೇಳಿದರು.
ಸಭೆಯಲ್ಲಿ ಅಬಕಾರಿ ಜಿಲ್ಲಾಧಿಕಾರಿ ನಾಗಶಯನ, ಡಯಟ್ ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಅಬಕಾರಿ ಇಲಾಖೆಯ ಎಲ್ಲಾ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…