ಮಂಡ್ಯ

ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಕಳ್ಳ ಭಟ್ಟಿ ದಂಧೆ ನಡೆಯುತ್ತಿಲ್ಲ ಎಂದು ಹೇಳಿದರು.

ಸೇಂದಿ ಮಾರಾಟ ಮಾಡದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಹಾಗೂ ಅತಂಹ ಜಾಗಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇಂದಿ ಮಾರಾಟ ಎರಡನ್ನು ನಿಲ್ಲಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 671 ಅಕ್ರಮ ಮದ್ಯ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದರು.

ಸ್ಲಂ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಆಗದಂತೆ ಹಾಗೂ ಗಾಂಜಾ ಮಾರಾಟ ಮಾಡದಂತೆ ಮಾಡುವ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಹಾಗೂ ಆ ಸ್ಥಳಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.

ಇದನ್ನೂ ಓದಿ:-ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ

ಕಳೆದ ವರ್ಷ 33 ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಸದರಿ ವರ್ಷ ಆರು ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಅರಣ್ಯ ಪ್ರದೇಶ ಹಾಗೂ ಬೆಳೆಗಳ ನಡುವೆ ಗಾಂಜಾ ಬೆಳೆದಿರುವ ಸಾಧ್ಯತೆ ಇರುತ್ತದೆ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರೈತರಿಗೆ ಗಾಂಜಾ ಬೆಳೆಯುವುದು ತಪ್ಪು ಹಾಗೂ ಅದರಿಂದ ಎದುರಿಸಬೇಕಾದ ಪರಿಣಾಮಗಳನ್ನು ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಡಿಪ್ಲೋಮಾ ಪದವಿ ಕಾಲೇಜುಗಳು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಗಾಂಜಾ ಕುರಿತಾಗಿ ಹಾಗೂ ಅದರ ದುಷ್ಪರಿಣಾಮಗಳ ಕುರಿತಾಗಿ ಅರಿವು ಮೂಡಿಸಿ. ಗ್ರಾಮ ಸಭೆಗಳಲ್ಲಿ ಜನರಿಗೆ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟದ ಕುರಿತಾಗಿ ಅರಿವು ಮೂಡಿಸಿ. ಅಬಕಾರಿ ಇಲಾಖೆ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ ಅಕ್ರಮ ಮಧ್ಯೆ ಗಾಂಜಾ ಹಾಗೂ ಡ್ರಗ್ಸ್ ನಂತಹ ಮಾದಕ ಪದಾರ್ಥಗಳು ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಅಬಕಾರಿ ಜಿಲ್ಲಾಧಿಕಾರಿ ನಾಗಶಯನ, ಡಯಟ್ ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಅಬಕಾರಿ ಇಲಾಖೆಯ ಎಲ್ಲಾ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago