ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು.
ಇಂದು ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರು ದಿನವಿಡಿ ಬಿಸಿಲು, ಮಳೆ, ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ.
ಪೊಲೀಸರು ಇಂತಹ ಒಂದು ತ್ಯಾಗಮಯಿ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು.
ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ಶ್ರಮವಹಿಸಿ ಕರ್ತವ್ಯ ನಿಷ್ಠೆಯನ್ನು ಪೊಲೀಸರು ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…