ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು.
ಇಂದು ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರು ದಿನವಿಡಿ ಬಿಸಿಲು, ಮಳೆ, ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ.
ಪೊಲೀಸರು ಇಂತಹ ಒಂದು ತ್ಯಾಗಮಯಿ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು.
ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ಶ್ರಮವಹಿಸಿ ಕರ್ತವ್ಯ ನಿಷ್ಠೆಯನ್ನು ಪೊಲೀಸರು ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…