ಮಂಡ್ಯ

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ ಎಂದು ಶಾಸಕ ರವಿಕುಮಾರ್‌ ಗಣಿಗ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದೇವೆ. ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.

ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯನಿರ್ವಹಿಸದಿರುವುದು ಮತ್ತು ಜನರಿಗೆ ಲಭ್ಯವಿಲ್ಲದಿರುವುದು ಕೆಲಸಗಳಿಗೆ ತೀವ್ರ ಅಡ್ಡಿಯಾಗುತ್ತಿದೆ. ಆದ್ದರಿಂದ ಇಂತಹ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago