ಮಂಡ್ಯ

ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸಿ: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ : ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ವಸತಿ ಹಾಗೂ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಭಾಗದಲ್ಲಿ ನಿವೇಶನ ಒದಗಿಸಲು ಸರ್ಕಾರಿ ಭೂಮಿ ಇದ್ದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಿ ಎಂದರು.

ಗ್ರಾಮಗಳಲ್ಲಿ ಹಕ್ಕು ಪತ್ರ, ನಿವೇಶನ ಕುರಿತು ಸಮಸ್ಯೆಗಳಿದ್ದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಮಸ್ಯೆ ಪರಿಹಾರವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನ ಕೂಲಿ ಕೊಡಬೇಕು ಎಂಬ ನಿಯಮವಿದ್ದರೂ, ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ಮಾನವ ದಿನಗಳಿಗೆ ಕೈಲಿ ಅನುದಾನ ಬಿಡುಗಡೆಯಾಗುತ್ತದೆ. 100 ದಿನವಿದೆ ಎಂದು ಕೆಲಸ ಕೊಟ್ಟಿ ಕೂಲಿ ಪಾವತಿಗೆ ಹಣ ಬಿಡುಗಡೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಈ ಕುರಿತಂತೆ ಪಂಚಾಯತ್ ರಾಜ್ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು.

ನರೇಗಾ ಕೆಲಸಗಳಿಗೆ ಕಡಿಮೆ ಹಾಗೂ ಹೆಚ್ಚಿನ ಬೇಡಿಕೆ ಇರುವ ತಾಲ್ಲೂಕುಗಳನ್ನು ಪಟ್ಟಿ ಮಾಡಿಕೊಂಡು ಯಾವುದೇ ತೊಂದರೆ ಇಲ್ಲದ ರೀತಿ ಸರುದೂಗಿಸಿ ಎಂದರು.

ನರೇಗಾ ಯೋಜನೆಯಡಿ ಕೂಲಿ‌ ಕಾರ್ಮಿಕರಿಗೆ ಆದ್ಯತೆ ನೀಡಬೇಕು. ನರೇಗಾ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ರೂಪದಲ್ಲಿ ನೀಡುವುದನ್ನು ನಿಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಕೂಲಿ ಕಾರ್ಮಿಕರಿಗೆ ಯಾವುದೇ ಆಧಾರವಿಲ್ಲದೆ ಬ್ಯಾಂಕ್ ಗಳಿಂದ 2 ಲಕ್ಷ ರೂ ಸಾಲ ನೀಡಬೇಕು ಈ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಸಚಿವರು ಬ್ಯಾಂಕ್ ವಿಷಯಗಳಿಗೆ ಸಂಬಂಧಿಸಿದಂತೆ ವ್ಯಕ್ತಿವಾರು ಮಾಹಿತಿ ನೀಡಿದರೆ ಬ್ಯಾಂಕ್ ನೊಂದಿಗೆ ಚರ್ಚಿಸುವುದು ಸುಲಭ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ವಿಷಯಗಳಿಗೆ ಪ್ರತ್ಯೇಕವಾಗಿ ಸಭೆ ನಡೆಸುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಮಂಡ್ಯ ನಗರ ವ್ಯಾಪ್ತಿಯಲ್ಲಿ ಸುಮಾರು 2000 ಕ್ಕೂ ಹೆಚ್ಚು ಜನ ನಿವೇಶನ ರಹಿತ ಬಡವರಿದ್ದು ಅವರಿಗೆ ನಿವೇಶನ ಒದಗಿಸಲು 35 ಎಕರೆ ಭೂಮಿ ಬೇಕಿದ್ದು, ಮಂಡ್ಯ ನಗರ ವ್ಯಾಪ್ತಿಯಲ್ಲಿ ಇರುವುದಿಲ್ಲ 10 ಕಿಮೀ ವ್ಯಾಪ್ತಿಗೆ ಹೋದರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ನಿವೇಶನ ಒದಗಿಸಲು ಸಮಸ್ಯೆ ಪರಿಹರಿಸಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಹೆ ಏರಿಸುವುದು ಕುರಿತಂತೆ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಬೇಕಿದೆ ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ .ನಂದಿನಿ ಅವರು ಮಾತನಾಡಿ ಜಿಲ್ಲೆಗೆ ಕಳೆದ ವರ್ಷಗಳಲ್ಲಿ ನರೇಗಾ ಯೋಜನೆಯಡಿ 30 ಲಕ್ಷ ಮಾನವ ದಿನಗಳನ್ನು ನೀಡಲಾಗಿತ್ತು. ಈ ಬಾರಿ 50 ಲಕ್ಷ ಬೇಡಿಕೆಯ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗಿತ್ತು. ಆದರೆ ಈ ಬಾರಿ ನೀಡಿರುವುದು 19 ಲಕ್ಷ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು‌

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

3 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

4 hours ago