ಮಂಡ್ಯ

ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ: ಚಿಕ್ಕಲಿಂಗಯ್ಯ

ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ 12,000 ಫಲಾನುಭವಿಗಳಿಗೆ ಕಳೆದ ಬಾರಿ ಗೃಹಲಕ್ಷ್ಮಿ ಹಣ ತಲುಪಿಲ್ಲ ಎಂದು ಮಾಹಿತಿ ಬಂದಿದ್ದು, ಈ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು.

ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ 

ಅನ್ನಭಾಗ್ಯ ಯೋಜನೆಯಡಿಯಲ್ಲಿ 2025ರ ಫೆಬ್ರವರಿ ಮಾಹೆಯಿಂದ ನಗದು ಬದಲು ಅಕ್ಕಿ ನೀಡಲಾಗುತ್ತಿದೆ. ಪ್ರತಿ ಮಾಹೆಯಲ್ಲಿ ಸಾರ್ವಜನಿಕರಿಗೆ ವಿತರಿಸುವ ಅಕ್ಕಿ ಮತ್ತು ರಾಗಿಯ ಅಂಕಿ – ಅಂಶ ವರದಿಯನ್ನು ಮುಂದಿನ ಸಭೆಗಳಲ್ಲಿ ಸಲ್ಲಿಸಬೇಕು ಎಂದು ಹೇಳಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ರ ಜೂನ್ ಮಾಹೆಯಿಂದ 2025 ರ ಆಗಸ್ಟ್ ಮಾಹೆಯವರೆಗೆ ಒಟ್ಟು 1599.17 ಲಕ್ಷ ಮಹಿಳೆಯರು ಉಚಿತ ಟಿಕೆಟ್ ಪಡೆದು ಸಂಚರಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವೆಡೆ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರು ಬರುತ್ತಿದೆ. ಡಿಪೋ ಮ್ಯಾನೇಜರ್ ಗಳಿಗೆ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸಲು ತಿಳಿಸಿ ಎಂದರು.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

22 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

27 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago